ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
Cross references
ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.
ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.
ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ