ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
Cross references
ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,