ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
Cross references
ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ.
ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.