ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
Cross references
ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.
ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.
ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು;
ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.