ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
Cross references
ಎಲೀಫಜನ ಮಕ್ಕಳು ಯಾರಂದರೆ: ತೇಮಾನ್ ಓಮಾರ್ ಚೆಫೋ ಗತಾಮ್ ಕೆನಜ್;
ಬೆಲಗನು ಸತ್ತ ಮೇಲೆ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗನಾದ ಯೋಬಾಬನು ಆಳಿದನು.
ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು.
ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು.
ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು.