ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
Cross references
ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.
ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.
ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು.
ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.
ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.
ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ;
ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು.
ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;
ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.