ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
Cross references
ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.
ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.
ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ.
ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.
ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.