ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
Cross references
ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.
ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.
ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು.
ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.
ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.
ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.
ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.
ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.
ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.