ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
Cross references
ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.
ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ.
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ--
ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.