ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
Cross references
ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.
ನಿನ್ನ ಸೊಸೆಯ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು; ಅವಳು ನಿನ್ನ ಮಗನ ಹೆಂಡತಿ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.
ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
ನನ್ನ ಜನರ ಸ್ತ್ರೀಯರನ್ನು ಅವರ ರಮ್ಯ ವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ; ಅವರ ಮಕ್ಕಳಿಂದ ನನ್ನ ಮಹಿಮೆಯನ್ನು ಎಂದೆಂದಿಗೂ ತೆಗೆದಿ ದ್ದೀರಿ.
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.