ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
Cross references
ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
ಆಗ ಕರ್ತನು--ನಾನು ಮಾಡುವದನ್ನು ಅಬ್ರಹಾಮನಿಗೆ ಮರೆಮಾಡಲೋ?
ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ--
ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು.
ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.
ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು.
ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.
ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ
ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ
ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.