Home Bibles ಆಮೋಸ 4:6 · ಕನ್ನಡ ಬೈಬಲ್
ಆಮೋಸ 4:6 · ಕನ್ನಡ ಬೈಬಲ್

ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.

Cross references

ಲೇವ್ಯಕಾಂಡ 26:23

ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ

ಲೇವ್ಯಕಾಂಡ 26:26

ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.

ದ್ವಿತೀಯೋಪದೇಶಕಾಂಡ 28:38

ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.

ರೂತ 1:1

ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್‌ ದೇಶದಲ್ಲಿ ವಾಸಮಾಡಬೇಕೆಂದು ಹೋದನು.

1 ಅರಸುಗಳು 17:1

ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.

1 ಅರಸುಗಳು 18:2

ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.

2 ಅರಸುಗಳು 4:38

ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.

2 ಅರಸುಗಳು 6:25

ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.

2 ಅರಸುಗಳು 8:1

ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.

2 ದಿನವೃತ್ತಾಂತ 28:22

ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.

ಯೆಶಾಯ 3:1

ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.

ಯೆಶಾಯ 9:12

ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.

ಯೆಶಾಯ 9:13

ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.

ಯೆಶಾಯ 26:11

ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.

ಯೆರೆಮಿಯ 5:3

ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.

ಯೆರೆಮಿಯ 8:5

ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6

ಯೆಹೆಜ್ಕೇಲ 16:27

ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.

ಹೊಶೇಯ 5:15

ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.

ಹೊಶೇಯ 7:14

ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.

ಹೊಶೇಯ 11:5

ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.

ಯೋವೇಲ 2:12

ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.

ಆಮೋಸ 4:8

ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಹಗ್ಗಾಯ 2:17

ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.

ಜೆಕರ್ಯ 1:3

ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಪ್ರಕಟನೆ 2:21

ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.

ಪ್ರಕಟನೆ 9:20

ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.

ಪ್ರಕಟನೆ 16:10

ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು

Interlinear

Choose Theme