ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
Cross references
ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.
ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.
ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.
ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.
ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.