ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
Cross references
ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ
ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.
ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.
ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.