ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
Cross references
ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.
ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.
ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು.
ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.
ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.