ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
Cross references
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?
ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.
ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.