ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.
Cross references
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--
ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು.
ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.