Cross references
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ