ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
Cross references
ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.