ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
Cross references
ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.
ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು.
ಸಪ್ತ ತಾರೆಗಳನ್ನೂ ಮೃಗಶಿರವನ್ನೂ ವೃಷಭ ರಾಶಿಯನ್ನೂ ದಕ್ಷಿಣದ ಕೋಣೆಗಳನ್ನೂ ಮಾಡಿದಾತನು ಆತನೇ.
ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ.
ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?
ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ?
ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.
ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ.
ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.
ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.
ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.