ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
Cross references
ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ
ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;
ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.