ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
Cross references
ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.
ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.
ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.
ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ.
ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು.
ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.
ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;