Home Bibles ಆಮೋಸ 7:6 · ಕನ್ನಡ ಬೈಬಲ್
ಆಮೋಸ 7:6 · ಕನ್ನಡ ಬೈಬಲ್

ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.

Cross references

ನಿರ್ಗಮಕಾಂಡ 32:14

ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.

ನ್ಯಾಯಾಧಿಪತಿಗಳು 2:18

ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.

ನ್ಯಾಯಾಧಿಪತಿಗಳು 10:16

ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.

1 ದಿನವೃತ್ತಾಂತ 21:15

ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.

ಕೀರ್ತನೆಗಳು 78:38

ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.

ಕೀರ್ತನೆಗಳು 90:13

ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.

ಕೀರ್ತನೆಗಳು 135:14

ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು.

ಯೆರೆಮಿಯ 26:19

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ

ಯೆರೆಮಿಯ 42:10

ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.

ಆಮೋಸ 7:3

ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.

ಯೋನ 3:10

ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.

ಯೋನ 4:2

ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.

Interlinear

Choose Theme