ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
Cross references
ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು.
ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.
ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.
ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.
ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.
ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.
ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್ (ಅಳತೆ) ನಿಮಗಿರಬೇಕು.
ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ?
ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.