ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.
Cross references
ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.
ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು.
ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.
ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.
ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ.
ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು.
ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.
ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.