Home Bibles ಆಮೋಸ 9:11 · ಕನ್ನಡ ಬೈಬಲ್
ಆಮೋಸ 9:11 · ಕನ್ನಡ ಬೈಬಲ್

ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

Cross references

ಯೋಬ 1:10

ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.

ಕೀರ್ತನೆಗಳು 80:12

ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ?

ಕೀರ್ತನೆಗಳು 89:40

ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ.

ಕೀರ್ತನೆಗಳು 143:5

ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.

ಯೆಶಾಯ 5:5

ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.

ಯೆಶಾಯ 9:6

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.

ಯೆಶಾಯ 11:1

ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.

ಯೆಶಾಯ 16:5

ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.

ಯೆಶಾಯ 63:11

ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?

ಯೆರೆಮಿಯ 23:5

ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.

ಯೆರೆಮಿಯ 30:9

ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.

ಯೆರೆಮಿಯ 33:14

ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.

ಯೆರೆಮಿಯ 33:20

ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.

ವಿಲಾಪಗಳು 5:21

ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.

ಯೆಹೆಜ್ಕೇಲ 17:24

ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.

ಯೆಹೆಜ್ಕೇಲ 21:25

ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.

ಯೆಹೆಜ್ಕೇಲ 34:23

ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.

ಯೆಹೆಜ್ಕೇಲ 36:11

ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.

ಯೆಹೆಜ್ಕೇಲ 37:24

ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.

ಹೊಶೇಯ 3:5

ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.

ಮೀಕ 5:2

ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.

ಮೀಕ 7:14

ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.

ಲೂಕ 1:31

ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.

ಲೂಕ 1:69

ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.

ಅಪೋಸ್ತಲರ ಕೃತ್ಯಗಳು 2:30

ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.

ಅಪೋಸ್ತಲರ ಕೃತ್ಯಗಳು 15:15

ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ--

Interlinear

Choose Theme