ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
Cross references
ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ?
ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ.
ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.
ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ--