ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Cross references
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ.
ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.