ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
Cross references
ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ,
ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.