Home Bibles ಆಮೋಸ 9:4 · ಕನ್ನಡ ಬೈಬಲ್
ಆಮೋಸ 9:4 · ಕನ್ನಡ ಬೈಬಲ್

ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.

Cross references

ಆದಿಕಾಂಡ 44:21

ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ,

ನಿರ್ಗಮಕಾಂಡ 14:24

ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ

ಲೇವ್ಯಕಾಂಡ 17:10

ಇದಲ್ಲದೆ ಇಸ್ರಾಯೇಲ್‌ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

ಲೇವ್ಯಕಾಂಡ 26:33

ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.

ಲೇವ್ಯಕಾಂಡ 26:36

ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.

ದ್ವಿತೀಯೋಪದೇಶಕಾಂಡ 28:63

ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.

2 ದಿನವೃತ್ತಾಂತ 16:9

ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.

ಕೀರ್ತನೆಗಳು 34:15

ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.

ಕೀರ್ತನೆಗಳು 34:17

ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.

ಯೆರೆಮಿಯ 21:10

ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.

ಯೆರೆಮಿಯ 24:6

ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.

ಯೆರೆಮಿಯ 39:12

ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.

ಯೆರೆಮಿಯ 39:16

ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.

ಯೆಹೆಜ್ಕೇಲ 5:2

ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು

ಯೆಹೆಜ್ಕೇಲ 5:12

ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.

ಜೆಕರ್ಯ 13:8

ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.

Interlinear

Choose Theme