ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
Cross references
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.