ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
Cross references
ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.