ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
Cross references
ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.
ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು.
ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?