ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
Cross references
ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.
ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.