ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
Cross references
ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ.
ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.