ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
Cross references
ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ನಿಮ್ಮ ಬಳಿಗೆ ಬಂದ ನಾವು ನಿಮ್ಮನ್ನು ತಲುಪಲಿಲ್ಲವೋ ಎಂಬಂತೆ ಮೇರೆಯನ್ನು ಅತಿಕ್ರಮಿಸಿದವರಲ್ಲ.
ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ
ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.