Home Bibles ಕೊಲೊಸ್ಸೆಯವರಿಗೆ 2:12 · ಕನ್ನಡ ಬೈಬಲ್
ಕೊಲೊಸ್ಸೆಯವರಿಗೆ 2:12 · ಕನ್ನಡ ಬೈಬಲ್

ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.

Cross references

ಲೂಕ 17:5

ಆಗ ಅಪೋಸ್ತಲರು ಕರ್ತನಿಗೆ--ನಮ್ಮ ನಂಬಿಕೆ ಯನ್ನು ಹೆಚ್ಚಿಸು ಅಂದರು.

ಯೋಹಾನ 1:12

ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.

ಯೋಹಾನ 3:3

ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.

ಅಪೋಸ್ತಲರ ಕೃತ್ಯಗಳು 2:24

ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.

ಅಪೋಸ್ತಲರ ಕೃತ್ಯಗಳು 14:27

ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.

ರೋಮಾಪುರದವರಿಗೆ 4:24

ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.

ರೋಮಾಪುರದವರಿಗೆ 6:3

ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?

ರೋಮಾಪುರದವರಿಗೆ 6:8

ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.

ರೋಮಾಪುರದವರಿಗೆ 7:4

ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.

1 ಕೊರಿಂಥದವರಿಗೆ 12:13

ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.

1 ಕೊರಿಂಥದವರಿಗೆ 15:20

ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.

ಗಲಾತ್ಯದವರಿಗೆ 3:27

ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.

ಎಫೆಸದವರಿಗೆ 1:19

ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.

ಎಫೆಸದವರಿಗೆ 2:4

ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ

ಎಫೆಸದವರಿಗೆ 2:8

ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

ಎಫೆಸದವರಿಗೆ 3:7

ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.

ಎಫೆಸದವರಿಗೆ 3:17

ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು

ಎಫೆಸದವರಿಗೆ 4:5

ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ.

ಎಫೆಸದವರಿಗೆ 5:14

ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.

ಫಿಲಿಪ್ಪಿಯವರಿಗೆ 1:29

ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.

ಕೊಲೊಸ್ಸೆಯವರಿಗೆ 3:1

ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.

ತೀತ 3:5

ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.

ಹೆಬ್ರಿಯರಿಗೆ 6:2

ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.

ಹೆಬ್ರಿಯರಿಗೆ 12:2

ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ

ಹೆಬ್ರಿಯರಿಗೆ 13:20

ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು

ಯಾಕೋಬ 1:16

ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.

1 ಪೇತ್ರ 3:21

ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.

1 ಪೇತ್ರ 4:1

ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.

Interlinear

Choose Theme