ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
Cross references
ಆಗ ಅಪೋಸ್ತಲರು ಕರ್ತನಿಗೆ--ನಮ್ಮ ನಂಬಿಕೆ ಯನ್ನು ಹೆಚ್ಚಿಸು ಅಂದರು.
ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ.
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.