ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
Cross references
ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?
ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!
ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.
ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.
ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.