ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
Cross references
ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು.
ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.
ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ.
ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.
ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.
ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.