ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
Cross references
ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.
ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.
ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.