ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
Cross references
ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.