ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.
Cross references
ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ
ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ.
ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ
ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು.
ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.