ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ;
Cross references
ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ;
ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ
ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.