ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
Cross references
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.
ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--