ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
Cross references
ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.