ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
Cross references
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.
ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,