ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
Cross references
ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು.
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ