ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
Cross references
ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.
ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.
ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.
ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ.
ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.
ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;