ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
Cross references
ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
ಯಾವ ಮನುಷ್ಯನು ಕಳಂಕವುಳ್ಳವನಾಗಿರುತ್ತಾನೋ ಅಂದರೆ ಕಣ್ಣಿಲ್ಲದವನು ಇಲ್ಲವೆ ಕುಂಟನು ಚಪ್ಪಟೆ ಯಾದ ಮೂಗುಳ್ಳವನು ಹೆಚ್ಚಾದ ಅಂಗವುಳ್ಳವನು
ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು;
ಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಆ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು.
ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.
ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು
ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.